ಕ್ಲಾಸಿಕ್ ಸ್ಟಡಿ ಸರ್ಕಲ್ ನಿರ್ದೇಶಕ ವಿನೋದ ಬಿರಾದಾರ ಅಭಿಮತ
ಇಂಡಿ: ಅವಕಾಶಗಳು ಎಲ್ಲರಿಗೂ ಸಮನಾಗಿದ್ದು, ಅದನ್ನು ಸರಿಯಾದ ಹಂತದಲ್ಲಿ ಉಪಯೋಗಿಸಿಕೊಳ್ಳುವವನು ಯಶಸ್ವಿಯಾಗುತ್ತಾನೆ ಎಂದು ಕ್ಲಾಸಿಕ್ ಸ್ಟಡಿ ಸರ್ಕಲ್ ನಿರ್ದೇಶಕ ವಿನೋದ ಬಿರಾದಾರ ಹೇಳಿದರು. ಹಾಗೂ ಕೆಎಎಸ್, ಪಿಎಸ್ಐ ಗೆ ಯಾವ ರೀತಿ ತಯಾರಿ ಮತ್ತು ಅದಕ್ಕೆ ಸಂಬಂಧ ಪಟ್ಟಿರುವ ಪಠ್ಯಕ್ರಮದ ಬಗ್ಗೆ ಚರ್ಚಿಸಿದರಲ್ಲದೇ, ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿಯನ್ನು ತಿಳಿಸಿಕೊಟ್ಟರು.
ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ಐಕ್ಯೂಎಸಿ ಘಟಕ ಮತ್ತು ಕ್ಲಾಸಿಕ್ ಸ್ಟಡಿ ಸರ್ಕಲ್ ಸಹಯೋದಲ್ಲಿ ಹಮ್ಮಿಕೊಂಡ ಒಂದು ದಿನದ ಉಚಿತ ಸ್ಪರ್ದಾತ್ಮಕ ಪರೀಕ್ಷೆಗಳ ಕಾರ್ಯಗಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಉದ್ಯೋಗ ಪಡೆಯಬಹುದಾದ ಸಂಗತಿಗಳನ್ನು ಹೇಳಿದ ಅವರು ಇಂದಿನ ವಿದ್ಯಾರ್ಥಿಗಳಲ್ಲಿ ನಿರಂತರ ಓದಿನ ಮಹತ್ವದ ಕುರಿತಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಪ್ರೊ. ಆರ್.ಎಚ್.ರಮೇಶ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಪರೀಕ್ಷೆಗಳನ್ನು ಜಯಿಸಲು ಸಹಾಯಕಾರಿಯಾಗಿವೆ. ಸ್ಪರ್ಧಾತ್ಮ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಲೇಜಿನ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ನೌಕರಿ ಪಡೆಯಲಿ ಎಂದು ಆಶಿಸಿದರು.
ವೇದಿಕೆಯಲ್ಲಿ ಉದ್ಯೋಗ ಭರವಸಾ ಕೋಶದ ಸಂಯೋಜಕರಾದ ತಿಪ್ಪಣ್ಣ ಎಸ್. ವಗ್ದಾಳ, ಐಕ್ಯೂಎಸಿ ಸಂಯೋಜಕರಾದ ಡಾ. ಶೀರಿನೂಸುಲ್ತಾನ ಇನಾಂದಾರ, ಪ್ರೊ. ಕಿರಣ ರೇವಣಕರ, ಪ್ರೊ. ರಾಜಲಕ್ಷ್ಮೀ ಆರ್, ರಾಜೇಶ ಗಡ್ಡಿ, ಸೋಮಲಿಂಗ ಎಸ್ ಗಂಜಿ ವೇದಿಕೆಯಲ್ಲಿದ್ದರು.
ಕವೀಂದ್ರಕುಮಾರ ಚಾಬುಕಸ್ವಾರ ಸ್ವಾಗತಿಸಿದರು. ಸತೀಶಕುಮಾರ ಚುಂಚೂರ ವಂದಿಸಿದರು. ಆಕಾಶ ಪಾಟೀಲ ನಿರೂಪಿಸಿದರು.

