ಮುದ್ದೇಬಿಹಾಳ: ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಶಿರಸಿ, ಮತ್ತು ಶ್ರೀ ಪವಾಡ ಬಸವೇಶ್ವರ ಆಶ್ರಮ ಭಕ್ತವೃಂದ ಹಾಗೂ ಮಹರ್ಷಿ ವಾಲ್ಮೀಕಿ ವಿದ್ಯಾ ವರ್ಧಕ ಸಂಸ್ಥೆಯ ಚೇತನ ಹಿರಿಯ ಪ್ರಾಥಮಿಕ ಶಾಲೆ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ತಾಲೂಕಾ ಮಟ್ಟದ ಭಗವದ್ಗೀತಾ ಅಭಿಯಾನ-೨೦೨೩ ಸಪ್ತಾಹದ ಉದ್ಘಾಟನಾ ಸಮಾರಂಭವನ್ನು ಡಿ.೭ ರಂದು ಸಂಜೆ ೫ ಗಂಟೆಗೆ ಪಟ್ಟಣದ ಹಡಲಗೇರಿ ರಸ್ತೆಯ ಮಾರ್ಗದಲ್ಲಿ ಬರುವ ಪವಾಡ ಬಸವೇಶ್ವರ ಆಶ್ರಮದಲ್ಲಿ ಆಯೋಜಿಸಲಾಗಿದೆ.
ಆಶ್ರಮದ ಚನ್ನಮಲ್ಲಪ್ಪ ಶರಣರು ಉದ್ಘಾಟಿಸಲಿದ್ದು, ಅಧ್ಯಕ್ಷ ಬಸವರಾಜ ಮೋಟಗಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪ್ರಾಪಂಚಿಕ ಬದುಕಿಗೊಂದು ಭಗವದ್ಗೀತೆ ಎನ್ನುವ ವಿಷಯದ ಮೇಲೆ ತಾಳಿಕೋಟೆಯ ಬಾಲ ಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿಗಳಾದ ಚಿದಂಬರ ಕರಮರಕರ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚೇತನ ಹಿ.ಪ್ರಾ.ಶಾಲೆಯ ಅಧ್ಯಕ್ಷ ಈರಣ್ಣ ತಳವಾರ, ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಎಮ್.ಬಿ.ನಾವದಗಿ, ಪುರಸಭೆ ಸದಸ್ಯೆ ಸೋನಾಬಾಯಿ ನಾಯಕ ಹಾಗೂ ಜ್ಞಾನ ಭಾರತಿ ವಿದ್ಯಾ ಮಂದಿರದ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ, ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿಯ ಉಪಾಧ್ಯಕ್ಷ ಡಾ.ಪರಶುರಾಮ ಪವಾರ, ಚೇತನ ಹಿ.ಪ್ರಾ.ಶಾಲೆಯ ಮುಖ್ಯಗುರು ಎಸ್.ಎಸ್.ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದು ಅಭಿಯಾನದ ಸಂಚಾಲಕ ಹಾಗೂ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆ ಮುಖ್ಯಗುರು ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
