Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದಲ್ಲಿ ಅಭಿವೃದ್ಧಿಯ ಬರ :ಮಾಜಿ ಎಎಲ್ಸಿ ಶಹಾಪೂರ
(ರಾಜ್ಯ ) ಜಿಲ್ಲೆ

ರಾಜ್ಯದಲ್ಲಿ ಅಭಿವೃದ್ಧಿಯ ಬರ :ಮಾಜಿ ಎಎಲ್ಸಿ ಶಹಾಪೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಜ್ಯದಲ್ಲಿ ಕೇವಲ ಮಳೆಯ ಬರ ಬಿದ್ದಿಲ್ಲ, ಅಭಿವೃದ್ಧಿಯ ಬರವೂ ಸಿದ್ದರಾಮಯ್ಯ ಸರ್ಕಾರದಲ್ಲಿ ಎದ್ದು ಕಾಣುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಪೂರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅನುದಾನಿತ ಈಗಾಗಲೇ ಕೆಲಸ ಮಾಡುತ್ತಿರುವ ಅನುದಾನಿತ ಪದವಿ ಪೂರ್ವ ಉಪನ್ಯಾಸಕರುಗಳು ಕಡ್ಡಾಯವಾಗಿ ೨೦ ಗಂಟೆಗಳ ಕಾರ್ಯಭಾರ ನಿರ್ವಹಿಸಬೇಕು. ಸಮೀಪದ ಇನ್ನೊಂದು ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಇದ್ದಲ್ಲಿ ಅಲ್ಲಿ ಹೋಗಿ ಕಾರ್ಯ ನಿರ್ವಹಿಸಬೇಕು ಎಂಬ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವುದು ತುಘಲಕ್ ಆಡಳಿತ ಮಾದರಿ ಆದೇಶ ಎಂದು ಕಿಡಿಕಾರಿದರು.
ಉಪನ್ಯಾಸಕರು ತಾವು ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಶಿಕ್ಷಣ ಸಂಸ್ಥೆಗೆ ಹೋಗಿ ಕೆಲಸ ಮಾಡುವುದು ಅಸಾಧ್ಯವಾದ ಕೆಲಸ. ಸರ್ಕಾರ ಏಕಾಏಕಿ ಈ ರೀತಿಯ ಆದೇಶದಿಂದ ಮುಂದಿನ ತಿಂಗಳು ನಮ್ಮ ಸಂಬಳ ಬರುತ್ತೋ ಇಲ್ಲವೋ ಎನ್ನುವ ಆತಂಕದಲ್ಲಿ ಉಪನ್ಯಾಸಕರು ಕಾರ್ಯನಿರ್ವಹಿಸಬೇಕಾಗಿ ಬಂದಿದೆ. ವರ್ಷದಲ್ಲಿ ೩ ಬಾರಿ ಪರೀಕ್ಷೆ ನಡೆಸಬೇಕು ಎಂದು ಆದೇಶ ಮಾಡಿದೆ. ಕರ್ನಾಟಕದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಕವಲುದಾರಿಯಲ್ಲಿದೆ. ರಾಜ್ಯದಲ್ಲಿ ೧೨೩೦ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ೭೫೦ ಅನುದಾನಿತ ಪ.ಪೂ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದರೆ, ಇನ್ನೂ ೪೫೦೦ ಅನುದಾನರಹಿತ ಪ.ಪೂ.ಕಾಲೇಜುಗಳು ಸರ್ಕಾರ ಅನುದಾನ ಕೊಡುತ್ತದೆ ಎಂದು ಜಾತಕಪಕ್ಷಿಗಳಂತೆ ಕಾಯುತ್ತಿವೆ. ಸರ್ಕಾರ ೧೯೯೫ ರ ನಂತರದ ಅನುದಾನ ವಿಸ್ತರಣೆ ಮಾಡಬೇಕು ಎನ್ನುವ ಕೂಗು ಇದೆ. ಅದನ್ನು ಮೊದಲು ಮಾಡಲಿ ಎಂದರು.
ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ೩೦೦೦ ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲಾಗಿದೆ. ಶಿಕ್ಷಣದ ಕುರಿತು ನಿಮ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸಬೇಕು. ಕರ್ನಾಟಕ ಪ.ಪೂ.ಶಿಕ್ಷಣ ಇಲಾಖೆ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಕೂಡಲೇ ಅನುದಾನಿತ ಉಪನ್ಯಾಸಕರಿಗೆ ಕಾರ್ಯಭಾರ ಆದೇಶವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎನ್ನುವ ಕೂಗು ಇದೆ. ಅದನ್ನು ಸರ್ಕಾರ ಪರಿಗಣಿಸಬೇಕು. ಕಾರ್ಯಭಾರ ಅವಧಿ ೧೫ ಇದ್ದದ್ದನ್ನು ೧೬ ಮಾಡಿ ಆದೇಶ ಮಾಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದ್ದರು. ಅವರು ಮಾಡಲಿ ಒಂದು ವೇಳೆ ಈ ಸರ್ಕಾರ ತೊಲಗಿ ನಮ್ಮ ಸರ್ಕಾರ ಬಂದರೆ ನಾವು ಖಂಡಿತ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಆಡಳಿತ ಕುಸಿದು ಬಿದ್ದಿದೆ. ಹೇಗಾದರೂ ಮಾಡಿ ಕೇಂದ್ರದಲ್ಲಿ ಅಧಿಕಾರ ಹಿಡಿಯಬೇಕು ಎನ್ನುವ ಉದ್ದೇಶದಿಂದ ಉಚಿತ ಯೋಜನೆಗಳನ್ನು ನೀಡುತ್ತಿದ್ದಾರೆ. ಅಭಿವೃದ್ಧಿ ಕುಂಟಿತಗೊಂಡಿದೆ. ಸಿದ್ದರರಾಮಯ್ಯ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಕೇವಲ ಹಿಂದಿನ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟನೆ ಮಾಡತ್ತಿದ್ದರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇರುವ ವ್ಯವಸ್ಥೆಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದೆ ಈ ರೀತಿ ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಾಹೇಬಗೌಡ ಗೌರಿ, ಪದವಿ ಪೂರ್ವ ಉನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ.ಹೆಬ್ಬಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.