ಸಿಂದಗಿ: ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವುದು ದೇಶ ಸೇವೆಗೆ ಸಮಾನವಾದ ಪ್ರಕ್ರಿಯೆ ಎಂದು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಿಂದಗಿ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳು, ಲಿಂ.ಶ್ರೀ ಚೆನ್ನಯ್ಯಸ್ವಾಮಿ ಮತ್ತು ಲಿಂ.ಶಾರದಾದೇವಿ ಜನಕಲ್ಯಾಣ ಫೌಂಡೇಶನ್ ಹಾಗೂ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಮ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದು ವ್ಯಕ್ತಿಯ ದೇಹದಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಸಹ ಇಂದಿಗೂ ರಕ್ತವನ್ನು ಸಿದ್ಧಪಡಿಸುವಂತಹ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಗಿಲ್ಲ, ಹೀಗಾಗಿ ರಕ್ತವು ಒಬ್ಬರಿಂದ ಇನ್ನೊಬ್ಬರ ದೇಹಕ್ಕೆ ವರ್ಗಾವಣೆಯಾಗಲೇಬೇಕಾಗಿದೆ. ಇಂದಿನ ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆಕೊಟ್ಟರು.
ಈ ವೇಳೆ ವಿಜಯಪುರದ ಬಿ.ಎಮ್.ಪಾಟೀಲ ವೈದ್ಯಕೀಯ ವಿಶ್ವವಿದ್ಯಾಲಯದ ಮೆಡಿಕಲ್ ಸುಪರಿಂಟೆಡೆಂಟ್ ಸಂಯೋಜಕ ಡಾ.ರಾಜೇಶ ಹೊನ್ನುಟಗಿ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ೧೩೦ಕ್ಕೂ ಹೆಚ್ಚು ಜನ ಕಣ್ಣಿನ ತಪಾಸಣೆ ಮಾಡಿಕೊಂಡರು ಅದರಲ್ಲಿ ೬೫ಜನ ಉಚಿತ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸ್ವಯಂ ಪ್ರೇತರರಾಗಿ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಶಿಬಿರದಲ್ಲಿ ಡಾ.ಪ್ರಕಾಶ ಪಾಟೀಲ, ಡಾ.ವಿಜಯಕುಮಾರ ವಾರದ, ಡಾ.ಸುಭಾಸ್, ಡಾ.ಜ್ಯೋತಿ, ಡಾ.ಶಿವ, ಡಾ.ವಿಶಾಲ್, ಗಂಗಾಧರ ಹಿರೇಮಠ, ಕಲ್ಲಪ್ಪ ಸಾರವಾಡ, ಶ್ರೀಶೈಲ ಕುಂಬಾರ, ನೆಹರೂ ಪೋರವಾಲ್, ಗಂಗಾಧರ ಜೋಗುರ, ಭೀಮಾಶಂಕರ ಅರಳಗುಂಡಗಿ, ವಿರೇಶ ಜೋಗುರ, ಶಿವಕುಮಾರ ಜೋಗುರ ಸೇರಿದಂತೆ ವಿವಿಧ ಅಂಗ ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಶ್ರೀಮಠದ ಭಕ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

