ಶಾಸಕ ಅಶೋಕ ಮನಗೂಳಿ ಅವರಿಗೆ ಗೋಲಗೇರಿ ತಳವಾರ ಸಮಾಜದ ವತಿಯಿಂದ ಸನ್ಮಾನ
ಗೋಲಗೇರಿ: ಗ್ರಾಮದಲ್ಲಿ ತಳವಾರ ಸಮಾಜದ ವತಿಯಿಂದ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ ಮನಗೂಳಿ ಅವರು, ತಳವಾರ ಸಮಾಜದ ಬೇಡಿಕೆಗಳನ್ನು ಈಡೇರಿಸಲು ಸದಾ ಸಿದ್ದವಿರುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ತಳವಾರ ಸಮಾಜದ ಗೋಲಗೇರಿ ಗ್ರಾಮದಲ್ಲಿ ಇರುವ ಬಹಳ ವರ್ಷದ ಬೇಡಿಕೆ ಯಾಗಿದ್ದ ಈರಣ್ಣ ಮುತ್ಯಾ ಗುಡಿಯ ಕಟ್ಟಡದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಆರಂಭಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವು ಹತ್ತಿ, ರವಿರಾಜ ದೇವರಮನಿ, ಬಸವರಾಜ ಮಾರಲಭಾವಿ, ವಿಜುಗೌಡ ಕರ್ನಾಳ, ತಳವಾರ ಸಮಾಜದ ಮುಖಂಡರಾದ ಮಡಿವಾಳ ನಾಯ್ಕೋಡಿ, ಮಂಜುನಾಥ ನಾಯ್ಕೋಡಿ, ರಮೇಶ ತಳವಾರ, ಮಲ್ಲಣ್ಣ ನಾಯ್ಕೋಡಿ, (ಬೆಂಗಳೂರು), ರಾಜು ಯಂಕಂಚಿ, ಚಂದ್ರಾಮ ನಾಯ್ಕೋಡಿ, ಸಿದ್ದಪ್ಪ ನಾಯ್ಕೋಡಿ, ಭಾಗಪ್ಪ ಕೊಂಡಗೂಳಿ, ಭೀಮಣ್ಣ ತಳವಾರ, ಮಲ್ಲಪ್ಪ ನಾಯ್ಕೋಡಿ, ರಾವುತಪ್ಪ ಮಾಗಣಗೇರಿ, ಮಹಾಂತೇಶ ನಾಯ್ಕೋಡಿ, ರಾವುತ್ ನಾಯ್ಕೋಡಿ ಇದ್ದರು.

