ಆಲಮಟ್ಟಿ: ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ
ಕೃಷ್ಣಾ ತೀರ ಗುತ್ತಿಗೆದಾರರ ಸಂಘ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಳೆದ ಒಂದು ವರ್ಷದಿಂದ ಮುಳುಗಡೆ ಹಾಗೂ ಅಚ್ಚುಕಟ್ಟು ಪ್ರದೇಶದ ನೂರಾರು ಗುತ್ತಿಗೆದಾರರು ಹಲವಾರು ಕಾಮಗಾರಿಗಳನ್ನು ನಿರ್ವಹಿಸಿ ಪೂರ್ಣಗೊಳಿಸಿ ಬಿಲ್ ಸಲ್ಲಿಸಲಾಗಿದ್ದು, ಈ ವರೆಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹಲವಾರು ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆಗ್ರಹಿಸಿದರು.
ಹಲವಾರು ಗುತ್ತಿಗೆದಾರು ಕಾಮಗಾರಿಗಳನ್ನು ಪೂರ್ಣಗೊಳಿಸಿ ಕಾಮಗಾರಿಗಳನ್ನು ಬಿಲ್ ಸಂದಾಯ ಮಾಡಿ ಒಂದು ವರ್ಷ ಗತಿಸುತ್ತಾ ಬಂದರೂ ಇದುವರೆಗೆ ಹಣ ಬಿಡುಗಡೆ ಯಾಗಿಲ್ಲ. ಈ ಕಾಮಗಾರಿಗಳಿಗೆ ಶೀಘ್ರವಾಗಿ ಹಣ ಬಿಡುಗಡೆಯಾಗಬೇಕು.
2022/23 ರ ಆರ್ಥಿಕ ವರ್ಷದ ಕಾಮಗಾರಿಗಳನ್ನು ಟೆಂಡರ ಕರೆದು ಒಂದು ವರ್ಷ ಗತಿಸುತ್ತಾ ಬಂದರೂ ಕೂಡಾ ಇನ್ನೂ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ, ಪಾರದರ್ಶಕ ಕಾಯ್ದೆ ಅಡಿಯಲ್ಲಿರುವ ನಿಯಮಾವಳಿಗಳ ಪ್ರಕಾರ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣ ಗೊಳಿಸಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಗುತ್ತಿಗೆದಾರ ಮುಂಗಡ ಹಣ ಅವರ ಖಾತೆಗೆ ಜಮಾ ಮಾಡಬೇಕು ಎಂದು ಗುತ್ತಿಗೆದಾರರು ಆಗ್ರಹಿಸಿದರು.
ಆಲಮಟ್ಟಿ ವಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಾಲುವೆಗಳ ಹೂಳು ಸಮೀಕ್ಷೆ ಮಾಡಿ ಅಂದಾಜು ಪತ್ರಿಕೆ ತಯಾರಿಸಿ 5 ರಿಂದ 10 ಕಿ.ಮೀ ಗೆ ಒಂದರಂತೆ ಕಾಮಗಾರಿಯ ಟೆಂಡರ್ ಕರೆಯಬೇಕು. ಇಂತಹ ಕಾಮಗಾರಿಗಳನ್ನು ಪ್ಯಾಕೇಜ್ ಪದ್ದತಿಗೆ ಒಳಪಡಿಸಬಾರದು, ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರೆಯಲಾಗುವ ಕಾಮಗಾರಿಗಳಲ್ಲಿ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ 20%ರಷ್ಟು ಮೀಸಲಾತಿ ಕಲ್ಪಿಸಿ ಮುಳುಗಡೆ ಪ್ರದೇಶದ ಗುತ್ತಿಗೆದಾರರಿಗೆ ಕಾಮಗಾರಿಗಳ ನಿರ್ವಹಣೆಯಲ್ಲಿ ಆಧ್ಯತೆ ನೀಡಬೇಕು ಎಂದು ಗುತ್ತಿಗೆದಾರರು ಆಗ್ರಹಿಸಿದರು.
ಅಣೆಕಟ್ಟು ವೃತ್ತದಿಂದ ಮುಖ್ಯ ಎಂಜಿನಿಯರ್ ಕಚೇರಿವರೆಗೆ ಗುತ್ತಿಗೆದಾರರು ಪ್ರತಿಭಟನೆ ರ್ಯಾಲಿ ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಂ.ಎ. ಮೇಟಿ, ಶಿವು ಗದಿಗೆಪ್ಪಗೋಳ, ಸಿ.ಜಿ. ವಿಜಯಕರ, ಬಹದ್ದೂರ ರಾಠೋಡ, ಅಂದಾನಯ್ಯ ಮುಷ್ಟಿ ಗೇರಿ, ಮಹಾಂತೇಶ ಡೆಂಗಿ, ವೈ.ವೈ. ಬಿರಾದಾರ, ಹಣಮಂತಪ್ಪ ಪೂಜಾರಿ, ಮಕ್ಸೂದ್ ಮಕಾನದಾರ್, ಎಸ್. ಎಲ್. ಲಮಾಣಿ, ವಿ.ಎಂ. ಹಿರೇಮಠ ಮತ್ತಿತರರು ಇದ್ದರು.
ಮುಖ್ಯ ಎಂಜಿನಿಯರ್ ಎಚ್.ಸಿ. ಶ್ರೀನಿವಾಸ ಮನವಿ ಸ್ವೀಕರಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

