ವಿಜಯಪುರ: ಡಿಸೆಂಬರ್ ೯ ರಿಂದ ಭಾರತಾದ್ಯಂತ ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಪ್ರಾರಂಭಗೊಂಡಿದ್ದು, ಯಾತ್ರೆಯು ಡಿ.೧೪ ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸುತ್ತಿದ್ದು, ಈ ಯಾತ್ರೆಯನ್ನು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಭಗೀರಥ ವೃತ್ತದಿಂದ ಶಿಕಾರಖಾನೆಯ ವೆಂಕಟೇಶ್ವರ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಪ್ಪಾರ ಸೇವಾ ಸಂಘದ ಅಧ್ಯಕ್ಷ ಜಕ್ಕಪ್ಪ ಯಡವೆ ಅವರು ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ನೇತೃತ್ವದಲ್ಲಿ ಭಗೀರಥ ಪೀಠದ ಜಗದ್ಗುರು ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ , ಪ್ರಧಾನ ಕಾರ್ಯದರ್ಶಿಗಳಾದ ಯು ವೆಂಕೋಬ ವಕೀಲರ ನೇತೃತ್ವದಲ್ಲಿ ಸದರಿ ಯಾತ್ರೆಯು ಸಾಗಲಿದೆ ಎಂದರು.
ಈ ಯಾತ್ರೆಯಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಮಾಜಿ ಹಾಲಿ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ರಾಜ್ಯ ಮುಖಂಡರು, ಸಮಾಜದ ಮಾಜಿ-ಹಾಲಿ ಜನಪ್ರತಿನಿಧಿಗಳು ಸಮಾಜದ ಹಾಲಿ-ನಿವೃತ್ತ ನೌಕರರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುವ ಉಪ್ಪಾರ ಸಮಾಜವನ್ನು ಸಂಘಟಿಸಿ, ಭಗೀರಥ ಸಮಾಜ ಎಂದು ದೇಶ ದಾದ್ಯಂತ ಕರೆಯಬೇಕು. ಭಾರತ ದೇಶದಾದ್ಯಂತ ಭಗೀರಥ ಜಯಂತಿಯನ್ನು ಕೇಂದ್ರ ಸರ್ಕಾರದಿಂದ ಆಚರಿಸಬೇಕು. ಕೇಂದ್ರ ಸರಕಾರವು ಭಗೀರಥ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅದಕ್ಕೆ ವಾರ್ಷಿಕ ೨೦೦೦ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು. ಹರಿದ್ವಾರದಲ್ಲಿ ಉಪ್ಪಾರ ಸಮಾಜಕ್ಕೆ ಸ್ಥಳ ಮೀಸಲಿಟ್ಟು, ಗಂಗಾ ನದಿ ಭೂಲೋಕಕ್ಕೆ ತಂದ ಭಗೀರಥರ ಬೃಹತ್ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಕರ್ನಾಟಕ ರಾಜ್ಯ ಸರ್ಕಾರವು ಉಪ್ಪಾರ ಹಾಗೂ ಅದರ ಉಪಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದೂ ಒತ್ತಾಯಿಸಿದರು.
ಧೇಯೋದ್ದೇಶಗಳೊಂದಿಗೆ ಹರೀಶ್ ಮಹತೋ ಚೌವ್ಹಾಣ್ ಹಾಗೂ ದೇಶದ ವಿವಿಧ ರಾಜ್ಯಗಳ ಹನ್ನೊಂದು ಜನರ ತಂಡದೊಂದಿಗೆ ಭಾರತ ದೇಶದಾದ್ಯಂತ ಈ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಕಾರ್ಯದರ್ಶಿ ಸಿದ್ದು ಗೇರಡೆ, ಸೋಮಶೇಖರ ಬಂಡಿ, ಮುತ್ತಪ್ಪ ಕೆ. ಶಿವಣ್ಣನವರ, ಅನೀಲ ಅವಳ, ಜಿ.ಎಲ್.ಕಸ್ತೂರಿ (ವಕೀಲರು), ಲಕ್ಷ್ಮಣ ಉಪ್ಪಾರ, ಯಲ್ಲಪ್ಪ ಬಂಡಿ, ಗೋವಿಂದ ಕಸ್ತೂರಿ, ರಾಜು ಕಸ್ತೂರಿ, ನೌಕರ ಸಂಘದ ಅಧ್ಯಕ್ಷ ಪುಂಡಲೀಕ ಉಪ್ಪಾರ, ಶ್ರೀನಿವಾಸ ಅಂಬಲಿ, ಭೀಮಣ್ಣ ಉಪ್ಪಾರ, ಸಾಬು ಕಾತ್ರಾಳ, ಸಂಗು ಪಡಸಲಗಿ, ಆನಂದ ಗಣೂರ, ಸಿದ್ರಾಯ ಗುಗ್ಗರಿ, ಮಹಾಲಿಂಗ ಉಪ್ಪಾರ, ಸಾಬು ಗಂಗನಳ್ಳಿ, ಉಮಾ ಸುರೇಶ ಶಹಾಪೂರ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

