Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸ್ಕೃತ ಭಾರತೀಯ ಸಂಸ್ಕೃತಿ ಪರಂಪರೆಯ ಸಂಕೇತ
(ರಾಜ್ಯ ) ಜಿಲ್ಲೆ

ಸಂಸ್ಕೃತ ಭಾರತೀಯ ಸಂಸ್ಕೃತಿ ಪರಂಪರೆಯ ಸಂಕೇತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಸ್ಕೃತ ಪಾಠಶಾಲಾ ಶಿಕ್ಷಕರಿಗೆ ಪುನಶ್ಚೇತನ ಶಿಬಿರದ ಸಮಾರೋಪದಲ್ಲಿ ಮಾಜಿ ಎಂಎಲ್ಸಿಅರುಣ ಶಹಾಪೂರ ಅಭಿಮತ

ಸಿಂದಗಿ: ಸಂಸ್ಕೃತ ಭಾಷೆ ಅತ್ಯಂತ ಪುರಾತನ ಭಾಷೆ ನಮ್ಮ ಭಾಷೆ. ಚೈನಾ ದೇಶದಲ್ಲಿಯೂ ಕೂಡಾ ಸಂಸ್ಕೃತ ಬಳಕೆಯಲ್ಲಿ ಇದೆ ಎಂದರೆ ಅದು ಭಾರತದ ಹೆಮ್ಮೆಯ ಸಂಗತಿ. ಆದರೆ ನಮ್ಮ ಸಂಸ್ಕೃತ ಭಾಷೆಯನ್ನು ಭಾರತೀಯರೆ ಆದ ನಾವುಗಳೂ ಅದನ್ನು ಪ್ರಚಾರ, ಪ್ರಸಾರ ಮಾಡದೆ ದೂರ ಮಾಡಿದ್ದೇವೆ ಎಂಬುದೇ ವಿಷಾದನೀಯ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಕಳವಳ ವ್ಯಕ್ತಪಡಿಸಿದರು.
ಅವರು ಪಟ್ಟಣದ ಶ್ರೀ ಸಾತವಿರೇಶ್ವರ ಸಭಾಭವನದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಮತ್ತು ಶ್ರೀ ಪದ್ಮರಾಜ ಸಂಸ್ಕೃತ ವೇದ ಪಾಠಶಾಲೆ ಇವುಗಳ ಸಹಯೋಗದಲ್ಲಿ ೧೦ ದಿನಗಳ ಕಾಲ ಆಯೋಜಿಸಿರುವ ಸಂಸ್ಕೃತ ಪಾಠಶಾಲಾ ಶಿಕ್ಷಕರಿಗೆ ಪುನಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಪರಂಪರೆಯ ಸಂಕೇತವಾಗಿದೆ. ಈ ಭಾಷೆ ನಮ್ಮ ಸಮಾಜವನ್ನು ಹಲವು ವರ್ಷಗಳಿಂದ ಶ್ರೀಮಂತಗೊಳಿಸುತ್ತಾ ಬಂದಿದೆ.ಇಂದಿನ ಮತ್ತು ಮುಂದಿನ ಪೀಳಿಗೆಗೆ ಈ ಭಾಷೆಯ ಮಹತ್ವ ತಿಳಿಯಪಡಿಸುವುದು ಅತ್ಯಂತ ಅವಶ್ಯವಾಗಿದೆ ಎಂದರು.
ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದ ಬಿಎಲ್‌ಡಿಇ ಸಂಸ್ಥೆಯ ಆರ್ಯೇದಿಕ ಕಾಲೇಜ್ ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ ಮಾತನಾಡಿ, ಸಂಸ್ಕೃತ ಭಾಷೆಯ ಬೆಳವಣಿಗೆಗೆ ಸರ್ಕಾರಗಳು ಹೆಚ್ಚು ಮಹತ್ವ ನೀಡಿ ಇದರ ವ್ಯಾಪ್ತಿಯನ್ನು ವಿಶಾಲ ಮಾಡಬೇಕು. ಪ್ರಾಥಮಿಕ ಹಂತದಿಂದ ಇದರ ಮಹತ್ವ ಮಕ್ಕಳಿಗೆ ಅರಿವು ನೀಡುವಂತಾಗಬೇಕು ಎಂದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಪ್ರೊ.ಜಿ.ಪಾಲಯ್ಯ ಹಾಗೂ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಸಹಾಯಕ ನೀರ್ದೇಶಕರು ಪ್ರೊ.ಮಲ್ಲನಗೌಡ ಎಸ್ ಮಾತನಾಡಿದರು.
ಸಮ್ಮುಖ ವಹಿಸಿದ ಕನ್ನೋಳ್ಳಿ ಹಿರೇಮಠದ ಶ್ರೀ ಸಿದ್ದಲಿಂಗ ಶೀವಾಚಾರ್ಯರು ಆಶೀರ್ವಚನ ನೀಡಿದರು. ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಶೋಕ ವಾರದ, ಜಗದೀಶ ಕರೆಪ್ಪನವರ, ಬಿ.ಬಿ.ಆರ್ಯರ್, ಚನ್ನಬಸವರಾಜ ಕತ್ತಿ, ವಿರೇಶ ಸ್ತಾçವರಮಠ ಮತ್ತು ಬೆಳಗಾವಿ ಧಾರವಾಡ, ಮೈಸೂರ ವಲಯಗಳ ಸುಮಾರು ೧೫ ಜಿಲ್ಲೆಗಳ ಅನುದಾನಿತ ಮತ್ತು ಅನುದಾನ ರಹಿತ ಸಂಸ್ಕೃತ ಪಾಠಶಾಲೆಯ ಸುಮಾರು ೨೫೦ ಕ್ಕೂ ಶಿಕ್ಷಕರು ಭಾಗವಹಿಸಿದ್ದರು.
ಶಿಕ್ಷಕಿ ಸುವರ್ಣ.ವೈ ನಿರೂಪಿಸಿದರು, ಶಿಕ್ಷಕ ನರಂಸಿವ ಭಟ್ಟ ಸ್ವಾಗತಿಸಿದರು, ಶಿಕ್ಷಕರ ಕಲ್ಮೇಶ ನಾಯಕ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.