ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿದ ಘಟನೆಗೆ ಖಂಡನೆ
ವಿಜಯಪುರ: ಬೆಳಗಾವಿ ತಾಲ್ಲೂಕು ವಂಟಮೂರಿ ಗ್ರಾಮದ ಪರಿಶಿಷ್ಟ ಪಂಗಡದ ಅಮಾಯಕ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡೆದಿರುವ ದೌರ್ಜನ್ಯ ಖಂಡಿಸಿ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಕಾಂಗ್ರೇಸ್ ವಿರುದ್ಧ ಘೋಷಣೆ ಹಾಕುವುದರ ಮೂಲಕ ಪ್ರತಿಭಟಿಸಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕುಚಬಾಳ) ಮಾತನಾಡಿ, ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆ ನಾಗರೀಕ ಸಮಾಜಕ್ಕೆ ಅಂಟಿದ ಕಪ್ಪುಚುಕ್ಕೆಯಾಗಿದ್ದು, ಅಮಾಯಕ ಮಹಿಳೆಯನ್ನು ಬೆತ್ತಲೆ ಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಅತ್ಯಂತ ಹೇಯ ಕೃತ್ಯ, ಸದರಿ ಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವು ತಲೆ ತಗ್ಗಿಸುವಂತೆ ಮಾಡಿದೆ. ಇಷ್ಟಾದರೂ ಮುಖ್ಯಮಂತ್ರಿಗಳು ಸೌಜನ್ಯಕ್ಕಾದರೂ ಸಂತ್ರಸ್ತೆಯನ್ನು ಭೇಟಿಯಾಗುವ ಮಾನವೀಯ ಕಾಳಜಿ ಇದುವರೆಗೂ ತೋರಿಲ್ಲ, ಕಾಟಾಚಾರಕ್ಕೆ ಗೃಹ ಸಚಿವರು ಭೇಟಿಯಾಗಿ ಸಾಂತ್ವನ ಹೇಳಿರುವುದನ್ನು ಬಿಟ್ಟರೆ ಇನ್ನಾರು ಈ ಕಡೆ ತಲೆಹಾಕಿದಂತಿಲ್ಲ ನಿನ್ನೆ ದಿನ ಹೈಕೋರ್ಟ್, ಈ ದುರ್ಘಟನೆ ನಡೆಯಲು ಸರ್ಕಾರ ಹೇಗೆ ಬಿಟ್ಟಿದೆ? ಪೊಲೀಸರ ಗಸ್ತು ಏಕೆ ಇರಲಿಲ್ಲ? ರಾಜ್ಯ ಸರಕಾರ ಇಂಥ ಘಟನೆ ಆಗದಂತೆ ತಡೆಯಲು ಏನು ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿ ಸಂತ್ರಸ್ತೆಯ ಸಹಾಯಕ್ಕೆ ಧಾವಿಸದ ಕುರಿತು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಆದರೂ, ರಾಜ್ಯ ಸರಕಾರವು ಇದನ್ನು ಈ ಕ್ಷಣಕ್ಕೂ ಗಂಭೀರವಾಗಿ ಪರಿಗಣಿಸಿಲ್ಲದಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಹೆಣ್ಣು ಮಕ್ಕಳ ಬಗ್ಗೆ ಇರುವ ತಾತ್ಸಾರ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಿಂಬೆ ಅಭಿವೃದ್ಧಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿದರು.
ಮಳುಗೌಡ ಪಾಟೀಲ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ವಿಠ್ಠಲ ಹೊಸಪೇಠ, ಭರತ ಕೋಳಿ, ಭೀಮಾಶಂಕರ ಹದನೂರ, ಸಂದೀಪ ಪಾಟೀಲ, ರಾಜೇಶ ತಾವಸೆ, ರಾಹುಲ ಜಾಧವ, ಕೃಷ್ಣಾ ಗುನ್ನಾಳಕರ, ಕಾಂತು ಶಿಂಧೆ, ಶಿವರುದ್ರ ಬಾಗಲಕೋಟ, ಮಲ್ಲಮ್ಮ ಜೋಗೂರ, ರಾಜಲಕ್ಷ್ಮಿ ಪರತನವರ, ಸಂಜಯಪಾಟೀಲ ಕನಮಡಿ, ಈರಣ್ಣ ರಾವೂರ, ವಿನಾಯಕ ದಹಿಂಡೆ, ಶ್ರೀಮತಿ ಕುರ್ಲೆ, ಮಂಬಾಲೇಶ್ರೀ ತೊನಶ್ಯಾಳ, ಸಂತೋಷ ನಿಂಬರಗಿ, ಆನಂದ ಮುಚ್ಚಂಡಿ, ಕುಮಾರ ಗಡಗಿ, ಪಾಪುಸಿಂಗ ರಜಪೂತ ಮುಂತಾದವರು ಇದ್ದರು.

