ಇಂಡಿ: ಸಮಾಜದಲ್ಲಿ ಆಡಂಬರದ ಮದುವೆಗಳು ಕಡಿಮೆಯಾದರೆ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿ ಅನೋನ್ಯವಾಗಿ ಬಾಳುವ ಮೂಲಕ ಈ ಕಾರ್ಯಕ್ರಮದ ಉದ್ದೇಶವನ್ನು ಸಾರ್ಥಕಪಡಿಸಬೇಕು ಎಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.
ಅವರು ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಲಿಂ. ಮುರುಘೇಂದ್ರ ಶಿವಾಚಾರ್ಯರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ನೇತೃತ್ವವಹಿಸಿ ಆಶೀರ್ವಚನ ನೀಡಿದರು.
ಶ್ರೀ ಮಠಕ್ಕೆ ಭಕ್ತರೇ ಆಸ್ತಿ. ನಾವು ೨೦೦೯ರಿಂದ ಪ್ರತೀ ವರ್ಷ ಸಾಮೂಹಿಕ ವಿವಾಹ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಶ್ರೀ ಮಠದ ಭಕ್ತರೇ ಎಲ್ಲ ಕಾರ್ಯಕ್ರಮಗಳಿಗೆ ಹಣ ಸಂಗ್ರಹಿಸಿ, ಕೆಲವರಿಗೆ ಜವಾಬ್ದಾರಿ ನೀಡಿ ಎಲ್ಲ ಕಾರ್ಯಕ್ರಮ ಯಶಸ್ವಿಗೊಳಿಸುತ್ತಾರೆ ಎಂದರು.
ಗಡಿ ಗೌಡಗಾಂವ ಮಠದ ಶಾಂತವೀರ ಶಿವಾಚಾರ್ಯರು ಮಾತನಾಡಿ, ಮಠಗಳು ಭಕ್ತರ ಉದ್ಧಾರಕ್ಕಾಗಿ ದುಡಿಯುವ ಕೇಂದ್ರಗಳಿದ್ದಂತೆ ಮಠಗಳಿಗೆ ಭಕ್ತರಿಂದ ಬಂದ ಭಕ್ತಿಯ ಕಾಣಿಕೆಯನ್ನು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತ್ತೆ ಭಕ್ತರಿಗೆ ಮುಟ್ಟಿಸಬೇಕು. ಅದು ಸ್ವಾಮೀಜಿಗಳ ಕೆಲಸ. ಆ ಕೆಲಸವನ್ನು ಚಾಚೂ ತಪ್ಪದೆ ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಮಾಡುತ್ತಿದ್ದಾರೆ.
ವಿವಾಹಗಳು ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸರಳ ಸಾಮೂಹಿಕ ವಿವಾಹಗಳ ಅಗತ್ಯತೆ ಹೆಚ್ಚಿದೆ. ಶಿರಶ್ಯಾಡದ ಶ್ರೀಗಳು ತಮ್ಮ ಭಕ್ತರಿಗೆ ಆರ್ಥಿಕ ಹೊರೆಯಾಗಬಾರದೆಂಬ ಕಾರಣಕ್ಕೆ ಸಾಮೂಹಿಕ ವಿವಾಹ ಹಮ್ಮಿಕೊಳ್ಳುತ್ತಿದ್ದಾರೆ ಎಂದರು.
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಿಕ್ ಮಾತನಾಡಿದರು.
ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀಮಂತ ಇಂಡಿ, ಪತ್ರಕರ್ತ ಉಮೇಶ ಬಳಬಟ್ಟಿ, ಸಮಾಜ ಕಲ್ಯಾಣ ಅಧಿಕಾರಿ ಭೀಮಾಶಂಕರ ಬಿರಾದಾರ ಮಾತನಾಡಿ, ಸಾಮೂಹಿಕ ವಿವಾಹಗಳು ಬಡವರ ವಿವಾಹಗಳಲ್ಲ. ಸಾಮೂಹಿಕ ವಿವಾಹ ಭಾಗ್ಯವಂತರ ವಿವಾಹಗಳಾಗಿವೆ. ಸಾಮೂಹಿಕ ವಿವಾಹಗಳಲ್ಲಿ ಹತ್ತಾರು ಶರಣರ ಆಶೀರ್ವಾದ, ಹಿರಿಯರ ಆಶೀರ್ವಾದ ಸಿಗುವುದಲ್ಲದೆ. ದಂಪತಿಗಳು ಮಠದಲ್ಲಿ ಮದುವೆಯಾಗಿದ್ದೇವೆ. ಸರಿಪಡಿಸಿಕೊಂಡು ಹೋಗಬೇಕು ಎನ್ನುವ ಭಾವದಿಂದ ದಾಂಪತ್ಯ ನಡೆಸುವುದರಿಂದ ಕೊನೆಯವರೆಗೂ ಒಂದಾಗಿ ಸುಖ-ಸಂತೋಷದಿಂದ ಬಾಳುತ್ತಾರೆ ಎಂದರು.
ಕಾರ್ಯಕ್ರಮದ ಸಾನಿಧ್ಯವಹಿಸಿ ಕಡಕೋಳದ ರುದ್ರಮುನಿ ಶಿವಾಚಾರ್ಯರು, ರೋಡಗಿಯ ಅಭಿನವ ಶಿವಲಿಂಗೇಶ್ವರ ಮಹಾಸ್ವಾಮಿಜಿ ಆಶೀರ್ವಚನ ನೀಡಿದರು.
ವೇದಿಕೆಯಲ್ಲಿ ಕಲ್ಲನಗೌಡ ಪಾಟೀಲ, ಕಾಶೀರಾಯಗೌಡ ಪಾಟೀಲ, ಮಡು ದೇಸಾಯಿ, ಮಲ್ಲನಗೌಡ ಪಾಟೀಲ, ಶಂಕರ ಚೌಹಾಣ, ನಾಗನಗೌಡ ಚೌಧರಿ, ಬಾಬುರಾಯಗೌಡ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

