ಬಸವನಬಾಗೇವಾಡಿ: ಸಮಾಜದಲ್ಲಿ ಅಪರಾಧಗಳು ನಡೆಯದಂತೆ ತಡೆಗಟ್ಟುವಲ್ಲಿ ಸಾರ್ವಜನಿಕರ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ಯುವಜನಾಂಗ,ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬಸವನಬಾಗೇವಾಡಿ ಪೊಲೀಸ್ ಠಾಣೆಯ ಪಿಎಸೈ ಶರಣಗೌಡ ನ್ಯಾಮಣ್ಣನವರ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆಯಲ್ಲಿ ಮಾತನಾಡಿದ ಅವರು, ಇಂದು ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸಾರ್ವಜನಿಕರ ಉದಾಸೀನತೆಯೂ ಒಂದು ಮುಖ್ಯ ಕಾರಣವಾಗಿದೆ. ಪ್ರತಿಯೊಬ್ಬರೂ ಸಾರ್ವಜನಿಕ ಬದುಕಿನಲ್ಲಿ ತುಂಬಾ ಜಾಗೃತರಾಗಿರಬೇಕು. ಇಂದು ದೈಹಿಕ ಅಪರಾಧ, ಆಸ್ತಿ ಅಪರಾಧ, ವಿದ್ಯುನ್ಮಾನ ಅಪರಾಧ ಎಂಬ ಬಗೆಯ ಅಪರಾಧಗಳು ಹೆಚ್ಚುತ್ತಿವೆ. ಈ ಮೂರು ಅಪರಾಧಗಳಲ್ಲಿ ಒಂದಾಗಿರುವ ವಿದ್ಯುನ್ಮಾನ ಅಪರಾಧಗಳಲ್ಲಿ ಮಹಿಳೆಯರೇ ಹೆಚ್ಚು ಬಲಿಯಾಗುತ್ತಿರುವುದು ವಿಷಾದಕರ ಸಂಗತಿ. ಪ್ರಜ್ಞಾವಂತ ನಾಗರಿಕರು ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದರೆ ಮುಂದೆ ಸಂಭವಿಸುವ ದುರಂತಗಳನ್ನು ತಡೆಗಟ್ಟಬಹುದು ಎಂದರು.
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಉತ್ತಮ ಸಮಾಜವನ್ನು ನಿರ್ಮಿಸಲು ಪೊಲೀಸ್ ಇಲಾಖೆಯೊಂದಿಗೆ ಸಮಾಜ ಸದಾ ಸಹಕರಿಸಬೇಕು. ರಸ್ತೆಯಲ್ಲಿ ಸಂಚರಿಸುವಾಗ ಪ್ರತಿಯೊಬ್ಬರೂ ರಸ್ತೆಯ ನಿಯಮಗಳನ್ನು ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ವಾಹನ ಚಾಲಕರು ಜೀವ ರಕ್ಷಕ ಸಾಧನಗಳನ್ನು ಧರಿಸಬೇಕು. ನಮ್ಮ ಇಲಾಖೆಯು ಸದಾಕಾಲ ನಿಮ್ಮ ಜೊತೆಯಲ್ಲಿದ್ದು ಸಮಾಜದ ರಕ್ಷಣೆಗೆ ಸದಾ ಬದ್ಧವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಪಾಲಕರಿಗೆ ಒಳ್ಳೆಯ ಮಗ, ಸಮಾಜಕ್ಕೆ ಆದರ್ಶ ನಾಗರಿಕ, ದೇಶದ ಆಸ್ತಿಯಾಗುವುದಕ್ಕಾಗಿ ಪೊಲೀಸ್ ಇಲಾಖೆಯುವ ನೀಡುವ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಜರಗಲಿರುವ ದುರ್ಘಟನೆಗಳನ್ನು ತಡೆಯುವಂತಾಗುತ್ತದೆ ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ ಅವರು ರಸ್ತೆ ಅಪಘಾತದ ವೈಜ್ಞಾನಿಕ ಕಾರಣಗಳ ಕುರಿತು ಮಾತನಾಡಿದರು.
ಪ್ರೊ.ಜೆ.ಎಸ್.ಡಾವಣಗೇರಿ ನಿರೂಪಿಸಿ, ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

