ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಕುವೆಂಪು ಜನ್ಮದಿನದ ಅಂಗವಾಗಿ ಡಿ.೨೯ ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಸಭಾಂಗಣದಲ್ಲಿ ಚುನಾವಣಾ ತಹಶೀಲ್ದಾರ್ ಪ್ರೇಮಸಿಂಗ್ ಪವಾರ ಅವರ ಅದ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಡಿ.೨೯ರಂದು ಕುವೆಂಪು ಜನ್ಮ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಅದರಂತೆ ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ನಿಮಿತ್ಯ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆ ಚಾಲನೆ, ನಂತರ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಕಾರ್ಯಕ್ರಮ ಅಚ್ಚು ಕಟ್ಟಾಗಿ ಆಯೋಜಿಸಲು ಸಮಾಜದ ಮುಖಂಡರು ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಂಡು ಎರಡೂ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜನೆಗೆ ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ, ಶ್ರೀಕಾಂತ ಕುಂದನಗಾನ, ಪ್ರದೀಪ ಗಿರಗಾಂವಕರ, ಮಹೇಂದ್ರ ಸ್ವಾಮೀಜಿ ಮೂರುಝಾವರಮಠ, ಪ್ರಕಾಶ ಪತ್ತಾರ, ಪ್ರಕಾಶ ಬಡಿಗೇರ, ಕೆ. ಸುನಂದ, ಎಮ್. ಕೆ. ಪತ್ತಾರ, ದೇವೇಂದ್ರ ಮಿರೇಕರ, ವಿದ್ಯಾವತಿ ಅಂಕಲಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಡಿ.೨೯ ರಂದು ವಿಶ್ವಮಾನವ, ಜ೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ
Related Posts
Add A Comment
