ವಿಜಯಪುರ: ಸಾಮಾಜಿಕ ಭಧ್ರತಾ ಯೋಜನೆಯಡಿಯ ಜಿಲ್ಲೆಯ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ನೊಂದಾಯಿಸಲು, ಪಿಂಚಣಿ ಕುರಿತು ಮಾಹಿತಿ ಪಡೆಯಲು ಡಿ.೨೭ ರಂದು ಜಿಲ್ಲೆಯ ೧೩ ಗ್ರಾಮ ಪಂಚಾಯತ್ಗಳಲ್ಲಿ ಗ್ರಾಮ ಪಂಚಾಯತಿ ಮಟ್ಟದ ಪಿಂಚಣಿ ಅದಾಲಯತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ತಾಲೂಕಿನ ಹೊನ್ನುಟಗಿ ಗ್ರಾಮ ಪಮಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಬಬಲೇಶ್ವರ ತಾಲೂಕಿನ ಕಾರಜೊಳ ಗ್ರಾಮ ಪಂಚಾಯತ್ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮ ಪಂಚಾಯತ್ನಲ್ಲಿ ಗ್ರೇಡ್-೨ ತಹಶೀಲ್ದಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೧ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನಿಡಗುಂದಿ ತಾಲೂಕಿನ ಚಿಮ್ಮಲಗಿ ಗ್ರಾಮ ಪಂಚಾಯತ್ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮ ಪಂಚಾಯತ್ನಲ್ಲಿ ಗ್ರೇಡ್-೧ ತಹಶೀಲ್ದಾರ ಅವರು, ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತ್ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಗ್ರೇಡ್-೨ತಹಶೀಲ್ದಾರ ಅವರು, ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಸಿಂದಗಿ ತಾಲೂಕಿನ ಹಿಕ್ಕನಗುತ್ತಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೧ ತಹಶೀಲ್ದಾರ ಅವರು, ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯತಿಯಲ್ಲಿ ಹಾಗೂ ಆಲಮೇಲ ತಾಲೂಕಿನ ಮಲಘಾಣ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೨ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
