ಮುದ್ದೇಬಿಹಾಳ: ವಕೀಲ ವೃತ್ತಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಇದೆ. ವಕೀಲರು ನಿರಂತರ ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷಗಾರರಿಗೆ ನ್ಯಾಯ ಒದಗಿಸುತ್ತಾ ಸಂವಿಧಾನದ ಆಶಯ ಹಾಗೂ ಹಕ್ಕುಗಳಿಗೆ ಧಕ್ಕೆ ತರದಂತೆ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಹಿರಿಯ ವಕೀಲರು ಕಿರಿಯ ವಕೀಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಕಿರಿಯ ವಕೀಲರು ನಿರಂತರ ಕಲಾಪಗಳಲ್ಲಿ ಭಾಗಿಯಾಗಬೇಕು. ಯಾವ ಕಾರಣಕ್ಕಾಗಿ ಸಮಯ ತೆದುಕೊಳ್ಳುತ್ತಿದ್ದೇವೆ ಎಂಬುದನ್ನ ಮೊದಲು ತಿಳಿದಿರಬೇಕು. ಕಲಾಪಗಳಲ್ಲಿ ಭಾಗಿಯಾಗುವ ಮುನ್ನ ಪ್ರಕರಣವನ್ನು ತಿಳಿದುಕೊಳ್ಳಬೇಕು. ಪ್ರಕರಣದ ಹಂತಗಳ ಬಗ್ಗೆ ಅಭ್ಯಾಸ ಮಾಡಬೇಕು. ಪ್ರಕರಣಗಳಲ್ಲಿ ಸಲ್ಲಿಸ ಬಹುದಾದ ಅರ್ಜಿಗಳನ್ನು ಸ್ವತಃ ನೀವೆ ಟೈಪ್ ಮಾಡಿದಲ್ಲಿ ಬೇಗನೆ ವೃತ್ತಿಯಲ್ಲಿ ನಿಪುಣತೆ ಪಡೆಯಬಹುದು ಎಂದು ಕಿವಿ ಮಾತು ಹೇಳಿದರು.
ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಮಾತನಾಡಿ, ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದು. ವಕೀಲರು ಎಷ್ಟೇ ಅಧ್ಯಯನ ಮಾಡಿದರೂ ಕಡಿಮೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ, ಸರ್ಕಾರಿ ವಕೀಲ ಬಸವರಾಜ ಆಹೇರಿ, ನ್ಯಾಯವಾದಿಗಳಾದ ಎಸ್.ಎಸ್.ಹೂಗಾರ, ಎಸ್.ಬಿ.ಬಾಚಿಹಾಳ, ಎಚ್.ವಾಯ್.ಪಾಟೀಲ, ಎಸ್.ಎಂ.ಚಿಲ್ಲಾಳಶೆಟ್ಟರ, ಶ್ರೀದೇವಿ ರಾಜೂರ ಮಾತನಾಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಎಜಿಪಿ ಎಚ್.ಎಲ್.ಸರೂರ, ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ವೇದಿಕೆಯಲ್ಲಿದ್ದರು. ಹಿರಿಯ ವಕೀಲರಾದ ಆರ್.ಬಿ.ಪಾಟೀಲ, ವಿರೇಶ ಬಿರಾದಾರ, ಸಂತೋಷ ನಾಯಕ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ ಕಾರ್ಯಕ್ರಮವನ್ನು ನಿರ್ವಹಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

