Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯಿಂದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ :ರಾಜು ಆಲಗೂರ
(ರಾಜ್ಯ ) ಜಿಲ್ಲೆ

ಬಿಜೆಪಿಯಿಂದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ :ರಾಜು ಆಲಗೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉಭಯ ಸದನಗಳ ೧೪೬ ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ವಿಜಯಪುರ: ಲೋಕಸಭೆ ಹಾಗೂ ರಾಜ್ಯಸಭೆಯ ಉಭಯ ಸದನಗಳ ೧೪೬ ಸಂಸದರನ್ನು ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಶುಕ್ರವಾರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ|| ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ರಾಜು ಆಲಗೂರ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಪ್ರಜಾಪ್ರಭುತ್ವ ವಿರೋಧಿ, ಜನವಿರೋಧಿ ಕೇಂದ್ರ ಬಿಜೆಪಿ ಸರಕಾರದ ಧೋರಣೆಯನ್ನು ಬಲವಾಗಿ ಖಂಡಿಸಲಾಯಿತು.
ಈ ಸಂದರ್ಭ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಸಂವಿಧಾನ ವಿರೋಧಿಯಾಗಿದ್ದು, ಇವರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ. ಹಾಗೂ ರಾಷ್ಟ್ರದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಈ ಸರಕಾರ ವಿರೋಧ ಪಕ್ಷಗಳ ಮೇಲೆ ಗದಾಪ್ರಹಾರ ಮಾಡುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಸಭಾಪತಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡು ವಿರೋಧ ಪಕ್ಷಗಳನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಇವರ ಜನವಿರೋಧಿ ನೀತಿಗಳನ್ನು ಪ್ರಶ್ನೆ ಮಾಡಿದಾಗ ಹಿಂಬಾಗಿಲಿನಿಂದ ಕೇಂದ್ರದ ಬಿಜೆಪಿ ಸರಕಾರ ವಿರೋಧ ಪಕ್ಷದ ಉಭಯ ಸದನಗಳ ಸಂಸದರನ್ನು ಅಮಾನತ್ತುಗೊಳಿಸುವುದು, ಯಾವುದೇ ಒಂದು ಸಣ್ಣ ವಿಷಯಕ್ಕೆ ಅನರ್ಹಗೊಳಿಸುವ ಕೃತ್ಯಗಳಿಗೆ ಕೈಹಾಕಿರುವುದು ಈ ದೇಶದ ದುರಂತಗಳಲ್ಲಿ ಒಂದು. ದೇಶದ ಜನ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಫ್. ಅಂಕಲಗಿ, ಆಜಾದ ಪಟೇಲ, ರಮೇಶ ಗುಬ್ಬೇವಾಡ, ಮಹ್ಮದರಫೀಕ ಟಪಾಲ, ಆರತಿ ಶಹಾಪೂರ, ಶಬ್ಬೀರ ಜಾಗೀರದಾರ, ಸಾಹೇಬಗೌಡ ಬಿರಾದಾರ ಮುಂತಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಚಂದ್ರಕಾಂತ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಾಹೇಬಗೌಡ ಬಿರಾದಾರ, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ, ಜಮೀರಅಹ್ಮದ ಬಕ್ಷಿ, ಮುಖಂಡ ಡಿ.ಎಲ್. ಚವ್ಹಾಣ, ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಅಮಿತ ಚವ್ಹಾಣ, ಮಹಾನಗರಪಾಲಿಕೆ ಸದಸ್ಯ ದಿನೇಶ ಹಳ್ಳಿ, ಅಂಗ ಘಟಕಗಳ ಅಧ್ಯಕ್ಷರಾದ ಕೃಷ್ಣಾ ಕಾಮಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನಮಲ್ಲ ಸಾರವಾಡ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಸೈಯದ ಅಫ್ತಾಬ ಖಾದ್ರಿ, ಭಾರತಿ ಹೊಸಮನಿ, ಭಾರತಿ ನಾವಿ, ಮಂಜುಳಾ ಗಾಯಕವಾಡ, ಪಯಾಜ ಕಲಾದಗಿ, ಅಫ್ಜಲ್ ಜಾನವೆಕರ, ಶಂಕರಸಿಂಗ ಹಜೇರಿ, ಕನ್ನಾನ ಮುಶ್ರೀಫ್, ಆಸ್ಮಾ ಕಾಲೆಬಾಗ, ಸಂತೋಷ ಬಾಲಗಾಂವಿ, ಮೊಹಮ್ಮದ ಮುಲ್ಲಾ, ಪರಶುರಾಮ ಹೊಸಮನಿ, ಗಿರೀಶ ಇಟ್ಟಂಗಿ, ರಜಾಕಸಾಬ ಕಾಖಂಡಕಿ, ದಸ್ತಗೀರ ಸಾಲೋಟಗಿ, ಪೀರಾ ಜಮಖಂಡಿ, ಮಂಜುನಾಥ ನಿಡೋಣಿ, ಜಹೀರಾ ಚೌಧರಿ, ಎ.ಎನ್. ಮನಗೂಳಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.