ವಿಜಯಪುರ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಭೆಯು ಪಕ್ಷದ ಕಾರ್ಯಾಲಯದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲೆಯ ಅಧ್ಯಕ್ಷರಾದ ಆರ್ ಎಸ್ ಪಾಟೀಲ ಕುಚಬಾಳ್ ಮಾತನಾಡಿ, ಭಾರತೀಯ ಜನತಾ ಪಾರ್ಟಿಯ ಕೇಂದ್ರ ಸರ್ಕಾರದ ಸಾಧನೆ ನರೇಂದ್ರ ಮೋದಿಜಿ ಅವರ ಅಭಿವೃದ್ಧಿಯ ಕಾರ್ಯದ ವಿಕಸಿತ ಭಾರತ ರಥವು ಈಗಾಗಲೇ ಜಿಲ್ಲೆಯಾದ್ಯಂತ ಸಂಚರಿಸುತ್ತಿದ್ದು ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ವಿಕಸಿತ ಭಾರತದೊಂದಿಗೆ ಅಧಿಕಾರಿಗಳು ಆಗಮಿಸುತ್ತಿದ್ದು ವಿವಿಧ ಅರ್ಜಿಗಳನ್ನ ಸಲ್ಲಿಸುವಲ್ಲಿ ಅಲ್ಲಿ ಅವಕಾಶವಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ದಿನಾಂಕ ೩೦ ರಂದು ವಿಜಯಪುರ ಜಿಲ್ಲೆಗೆ ರಾಜ್ಯಾಧ್ಯಕ್ಷರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿಯಾದ ಸ್ವಾಗತವನ್ನು ಕೋರಿ ದೊಡ್ಡಮಟ್ಟದ ಜಿಲ್ಲೆಯ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳುವ ಇಂಗಿತ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದ ರಮೇಶ್ ಜಿಗಜಿಣಗಿ, ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ, ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ದೇವರ ಹಿಪ್ಪರಗಿಯ ಮಾಜಿ ಶಾಸಕ ಸೋಮನಗೌಡ ಪಾಟೀಲ್, ಬಬಲೇಶ್ವರ ಮುಖಂಡರಾದ ವಿಜುಗೌಡ ಪಾಟೀಲ್, ಸಂಜು ಐಹೊಳೆ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗುರ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಸವರಾಜ್ ಬೈಚಬಾಳ ಸ್ವಾಗತಿಸಿದರು. ಪ್ರಭುಗೌಡ ಅಸ್ಕಿ ನಿರೂಪಿಸಿದರು. ಸಂಗು ಚಿಕ್ಕೊಂಡ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

