Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದರಿಗೆ ರೈತರ ಬಗ್ಗೆ ಅಪಾರ ಗೌರವ :ಶಂಕರಗೌಡ
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದರಿಗೆ ರೈತರ ಬಗ್ಗೆ ಅಪಾರ ಗೌರವ :ಶಂಕರಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ನಮ್ಮ ಅನ್ನದಾತರಿಗೆ ನೋವಾಗುವಂತಹ ಅಥವಾ ಅವರನ್ನು ಅಪಮಾನಿಸುವಂತಹ ಮಾತುಗಳನ್ನು ಜವಳಿ, ಕಬ್ಬು ಅಭಿವೃದ್ದಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಬಾಯಿತಪ್ಪಿಯೂ ಆಡುವುದಿಲ್ಲ. ಅವರು ರೈತರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಅವರು ಸೋಮವಾರ ದೂರವಾಣಿಯ ಮೂಲಕ ಸುದ್ದಿಗಾರರರೊಂದಿಗೆ ಮಾತನಾಡಿ, ಸಚಿವರು ಮಾತಾಡಿದ ಒಟ್ಟು ಭಾಷಣವನ್ನು ಒಮ್ಮೆ ಸರಿಯಾಗಿ ಕೇಳಿಸಿಕೊಂಡರೆ ಎಂಥವರಿಗೂ ಅದು ಅರ್ಥವಾಗುತ್ತದೆ. ಆದರೆ ವಿರೋಧ ಪಕ್ಷ ಬಿಜೆಪಿ ವಿರೋಧಿಸಲೇಬೇಕೆಂದು ಕೆಲವು ಮಾತುಗಳನ್ನಷ್ಟೇ ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ. ಇವತ್ತು ರಾಜ್ಯದ ಬಹುತೇಕ ವಾಣಿಜ್ಯ ಬೆಳೆಗಳ ಬೆಲೆಗಳನ್ನು ಕಡಿತ ಗೊಳಿಸಲಾಗಿದೆ. ರೈತರಿಗೆ ನ್ಯಾಯವಾಗಿ ಸಿಗಬೇಕಾದ ಬೆಲೆ ಸಿಗುತ್ತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಎಷ್ಟೇ ಮನವರಿಕೆ ಮಾಡಿಕೊಟ್ಟರೂ ತಮ್ಮಮೊಂಡಾಟ ಬಿಡುತ್ತಿಲ್ಲ. ಇದು ಲೋಕಸಭಾ ಚುನಾವಣೆಗಾಗಿ ಗ್ರಾಹಕರ ಕಣ್ಣೊರಿಸಿ ಅನ್ನದಾತರ ಹೊಟ್ಟೆ ಮೇಲೆ ಕಾಲಿಡುವ ತಂತ್ರ ಅಷ್ಟೇ ಅಲ್ಲ ರೈತರ ಮೇಲೆ ಕೇಂದ್ರ ಸರ್ಕಾರ ಮಾಡುತ್ತಿರುವ ಶೋಷಣೆ ಕೂಡ. “ರೈತರ ಬೆಳೆಗಳಿಗೆ ಸಿಗಬೇಕಾದ ನೈಜ ಬೆಲೆಗಳು ಸಿಕ್ಕರೆ ರೈತರೇ ಸಾಲಕೊಡುವಷ್ಟು ಸಬಲರಾಗುತ್ತಾರೆ. ಆಗ ಯಾರೂ ಸಾಲಮನ್ನಾ ಮಾಡಿ ಅನ್ನುವುದಿಲ್ಲ, ಬರಗಾಲದ ಪರಿಹಾರಕ್ಕೆ ಕಾಯುವಂತಹ ಪರಿಸ್ಥಿತಿ ನಮ್ಮ ರೈತರಿಗೆ ಬರುವುದಿಲ್ಲ” ಎಂಬರ್ಥದ ಮಾತುಗಳನ್ನಾಡಿದ್ದರೆ ವಿನಃ ಅನ್ನದಾತರನ್ನು ನೋಯಿಸುವಷ್ಟು ಕ್ರೂರ ಮನಸು ನಮ್ಮ ಸಚಿವರಿಗಿಲ್ಲ ಎಂದು ಹೇಳಿದರು.
ರಾಜ್ಯದ ರೈತರು ವಿರೋಧ ಪಕ್ಷದವರು ಮಾಡುವ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಸಚಿವ ಶಿವಾನಂದ ಪಾಟೀಲರು ಯಾವಾಗಲೂ ನಮ್ಮ ರೈತರ ಬೆಳವಣಿಗೆ ಬಗ್ಗೆ ಚಿಂತಿಸುವ ವ್ಯಕ್ತಿ .ಸಚಿವರು ಮಾಡಿದ ನೀರಾವರಿ ಯೋಜನೆಗಳಿಂದ ನಮ್ಮ ಬಸವನಬಾಗೇವಾಡಿ ಜನತೆ ಎಂದಿಗೂ ಮರೆಯುವುದಿಲ್ಲ. ಈ ವರ್ಷ ಮಳೆ ಬಾರದೆ ತೀವ್ರ ಬರಗಾಲ ಬಿದ್ದಾಗ ರೈತರ ಬೆಳೆಗಳಿಗೆ, ಜಾನುವಾರುಗಳಿಗೆ ಹಾನಿಯಾಗಬಾರದು ಎಂದು ಮನಗಂಡು ಕಾಲುವೆಗಳಿಗೆ ನೀರು ಹರಿಸಿ ಅನ್ನದಾತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅವರ ಬಗ್ಗೆ ಅಪಪ್ರಚಾರ ಮಾಡುವವರಿಗೆ ನಾಡಿನ ಜನತೆಯೇ ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.