ವಿಜಯಪುರ: ಅಜಾತಶತ್ರು, ಮಾಜಿ ಪ್ರಧಾನಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಸೋಮವಾರ ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕವಟಗಿ, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ರಾಜೇಶ ದೇವಗಿರಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಕಿರಣ ಪಾಟೀಲ, ಮಲ್ಲಿಕಾರ್ಜುನ ಗಡಗಿ, ವಿಠ್ಠಲ ಹೊಸಪೇಟ, ಮುಖಂಡರಾದ ಸಾಯಬಣ್ಣ ಬೋವಿ, ವಿಕ್ರಮ ಗಾಯಕವಾಡ, ಚಂದ್ರು ಚೌದರಿ, ಲಕ್ಷ್ಮಣ ಜಾಧವ, ರಾಜಶೇಖರ ಭಜಂತ್ರಿ, ಸಂತೋಷ ತಳಕೇರಿ, ವಿಜಯಕುಮಾರ ಗಚ್ಚಿನಕಟ್ಟಿ, ಲಕ್ಷ್ಮೀ ಕನ್ನೋಳ್ಳಿ, ಮಲ್ಲಮ್ಮ ಜೋಗೂರ ಸೇರಿದಂತೆ ವ್ಯಾಪಾರಸ್ಥರು, ಗುತ್ತಿಗೆದಾರರು, ಅಭಿಮಾನಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

