ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯಿಂದ ಬುಧವಾರ ಪಿಂಚಣಿ ದಿನಾಚರಣೆ ಕಾರ್ಯಕ್ರಮ ಜರುಗಿತು.
ಹೂವಿನಹಿಪ್ಪರಗಿ ನಾಡಕಚೇರಿಯ ಉಪತಹಸೀಲ್ದಾರ ಎಸ್.ಕೆ.ಪಾಟೀಲ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರ ಪಿಂಚಣಿ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಮನಸ್ವಿನಿ, ವಿಧವಾ ವೇತನ, ಸಂದ್ಯಾಸುರಕ್ಷಾ, ವಿಕಲಚೇತನ, ವೃದ್ಯಾಪ್ಯ ವೇತನ ಸೇರಿದಂತೆ ವಿವಿಧ ಪಿಂಚಣಿಗೆ ಅರ್ಹ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಆಗಮಿಸಿ ಅರ್ಜಿ ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಪಿಂಚಣಿ ಪಡೆಯಲು ಗ್ರಾಮ ವನ್ ಕೇಂದ್ರಗಳಲ್ಲಿಯೂ ಅರ್ಹ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂದು ಜರುಗಿದ ಪಿಂಚಣಿ ದಿನಾಚರಣೆಯಲ್ಲಿ ಹನ್ನೊಂದು ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು. ಮುಂದಿನ ದಿನಗಳಲ್ಲಿ ಅವರಿಗೆ ಮಂಜೂರಾತಿ ಆದೇಶಗಳನ್ನು ನೀಡಲಾಗುತ್ತಿದೆ. ಇಂದು ಹಿಂದೆ ಅರ್ಜಿ ಸಲ್ಲಿಸಿದ ಮೂರು ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ನೀಡಲಾಗಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶರಣಮ್ಮ ಕುಂಬಾರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೂವಿನಹಿಪ್ಪರಗಿ ಕಂದಾಯ ನಿರೀಕ್ಷಕ ವ್ಹಿ.ಜಿ.ಸಿಂದಗಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಆಸಂಗಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರೇಣುಕಾ ಮಡಿವಾಳರ, ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರ ಹುಲ್ಲೂರ, ಗ್ರಾಮಾಡಳಿತಾಧಿಕಾರಿ ರಮಾನಂದ ಚಕ್ಕಡಿ, ನಾಡಕಚೇರಿಯ ಸಿಬ್ಬಂದಿ ಗೌರಮ್ಮ ಕರಕುಂಚಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

