ವಿಜಯಪುರ: ಶತಮಾನದ ಶ್ರೇಷ್ಠ ಸಂತ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಯವರ ಗುರುನಮನ ದಿನದಂದು ಸರ್ಕಾರಿ ಕಛೇರಿ ಹಾಗೂ ಶಾಲಾ ಕಾಲೇಜುಗಳ ಸಿಬ್ಬಂದಿ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅನೂಕೂಲವಾಗಿಸಲು ಜನೇವರಿ 1 ಹಾಗೂ 2 ತಾರಿಖಿನ ಎರಡು ದಿನಗಳಂದು ರಜೆ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘವು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಮನಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಶ್ರೀಗಳು ಹಲವಾರು ದಶಕಗಳವರೆಗೆ ದೇಶ ವಿದೇಶಗಳಲ್ಲಿ ಸಂಚರಿಸಿ ಜ್ಞಾನದಾಸೋಹ ಮಾಡಿದವರು. ಪೂಜ್ಯರು 2023 ಜನೇವರಿ 2 ರಂದು ತಮ್ಮ ಭೌತಿಕ ದೇಹವನ್ನು ತ್ಯಜಿಸಿ ಬಯಲಲ್ಲಿ ಬಯಲಾದರು. ಆ ದಿನದಂದು ನಾವೆಲ್ಲರೂ ಪೂಜ್ಯರಿಗೆ ತಮ್ಮ ಹೃದಯಾಂತರಾಳದ ನಮನಗಳನ್ನು ಅರ್ಪಿಸುವದು ಆದ್ಯ ಕರ್ತವ್ಯವಾಗಿದೆ ಎಂದರು.
ಎರಡು ದಿವಸಗಳ ಕಾಲ ನಡೆಯುವ ಎಲ್ಲ ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸರಕಾರಿ ನೌಕರರು ಹಾಗೂ ಶಾಲಾ ಮಕ್ಕಳು ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲೆಯ ಸರಕಾರಿ ಕಛೇರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ಎರಡು ದಿವಸ ರಜೆ ಘೋಷಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ವಿಜಯಕುಮಾರ ಹತ್ತಿ, ಗಂಗಾಧರ ಜೆವೂರ, ನಿಜು ಮೇಲಿನಕೇರಿ, ಬಶೀರ ನದಾಫ, ಎಸ್.ಎಚ್. ಹುಣಶಿಕಟ್ಟಿ, ನಿಂಗನಗೌಡ ಬಿರಾದಾರ, ಡಿ.ಕೆ. ತಾವಸೆ, ಎ.ಎಫ್. ಅರಳಿಮಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

