Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರವಾನಗಿ ಭೂಮಾಪಕರ ಮೇಲಿನ ಹಲ್ಲೆ ಖಂಡನೀಯ
(ರಾಜ್ಯ ) ಜಿಲ್ಲೆ

ಪರವಾನಗಿ ಭೂಮಾಪಕರ ಮೇಲಿನ ಹಲ್ಲೆ ಖಂಡನೀಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ವಡವಡಗಿ ಗ್ರಾಮದಲ್ಲಿ ಕಾರ್ಯಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಭೂಮಾಪಕರಿಗೆ ಕಾರ್ಯಕ್ಷೇತ್ರದಲ್ಲಿ ಸರ್ಕಾರ ಸೂಕ್ತ ಭದ್ರತೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರ ಭೂಮಾಪಕರು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ತಾಲೂಕಿನ ವಡವಡಗಿ ಗ್ರಾಮದ ಸರ್ವೆ ನಂ.೧೫೬/೧ ರಲ್ಲಿ ತಕರಾರು ಪ್ರಕರಣದ ಅಳತೆ ಕಾರ್ಯಕ್ಕೆ ಪರವಾನಗಿ ಭೂಮಾಪಕರಾದ ಶಿವರಾಜ ಚೌಧರಿ ಅವರು ಹೋದ ಸಂದರ್ಭದಲ್ಲಿ ಏಕಾಏಕಿ ಭೂಮಾಪಕರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಜರುಗಿದೆ. ಈ ಭೂಮಾಪಕರ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು.ಭೂಮಾಪಕರು ತಮ್ಮ ಕಾರ್ಯಕ್ಷೇತ್ರಕ್ಕೆ ಹೋದ ಸಂದರ್ಭದಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೇ ಕಾರ್ಯನಿರ್ವಹಿಸುವಂತಾಗಿದೆ. ತಕರಾರು ಪ್ರಕರಣಗಳನ್ನು ಪರವಾನಗಿ ಭೂಮಾಪಕರಿಗೆ ಹಂಚಿಕೆ ಮಾಡಲಾಗುತ್ತಿದೆ. ಕೆಲವು ತಕರಾರು ಪ್ರಕರಣಗಳ ಅಳತೆ ಕಾರ್ಯ ಕಷ್ಟ ಸಾಧ್ಯವಾಗಿದೆ. ಈ ತಕರಾರು ಪ್ರಕರಣಗಳಿಗೆ ಬೇಕಾದ ಬಾಂದ ಜವಾನರು, ಸೇವಾ ಭದ್ರತೆ ಇಲ್ಲದೇ ಕೆಲಸ ನಿರ್ವಹಿಸಲು ಸಮಸ್ಯೆಯಾಗುತ್ತಿದೆ. ಮಹಿಳಾ ಪರವಾನಗಿ ಭೂಮಾಪಕರು ಸಹ ಇಲಾಖೆ ಸೂಚಿಸಿದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೂ ಯಾವುದೇ ಭದ್ರತೆ ಇರುವುದಿಲ್ಲ. ಇಂತಹ ಘಟನೆಗಳ ಬಗ್ಗೆ ಹಲವಾರು ಸಲ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ನಮಗೆ ಭದ್ರತೆ ಒದಗಿಸಿ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಭೂಮಾಪಕರಾದ ವಿಠ್ಠಲ ಅರ್ಥಗಾ, ಸುರೇಶ ಪಾಟೀಲ, ಪರಶುರಾಮ ಅಬ್ಬಿಗರ, ಆಕಾಶ ಬಾಗೇವಾಡಿ, ಅರುಣ ವಾಲಿ, ಮಹೇಶ ಪಟ್ಟಣಶೆಟ್ಟಿ, ವಿರೇಶ ಮುದ್ದೇಬಿಹಾಳಮಠ, ಶಂಕರ ತಿಪ್ಪಣ್ಣವರ, ಶ್ರೀಕಾಂತ ಪಾಟೀಲ, ನಿಂಗನಗೌಡ ಸುಂಬಡದ, ಮಲ್ಲಿಕಾರ್ಜುನ ಮುದ್ದರಕಿ, ಸದಾನಂದ ಎಸ್.ಎಚ್. ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.