ಸಿಂದಗಿ: ಕಂದಾಯ ಇಲಾಖೆಯ ಸೆಕ್ರೆಟೆಡ್ ಆಫೀಸಿನ ಉಲ್ಲೇಖದ ಮೇರೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆನ್ನುವ ಜನಾಭಿಪ್ರಾಯ ಸಂಗ್ರಹ ಮಾಡಲು ಸಭೆ ಕರೆಯಲಾಗಿದೆ. ಅದಕ್ಕೆ ಸಾಧಕ ಬಾಧಕಗಳನ್ನು ಚರ್ಚಿಸಿ ಅಭಿಪ್ರಾಯ ಮಂಡಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾರಣ ಜ.೧೦ರ ಒಳಗಾಗಿ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಚಂದ್ರಕಾಂತ ಗದ್ಯಾಳ ಹೇಳಿದರು.
ಪಟ್ಟಣದ ತಾಪಂ ಸಭಾ ಭವನದಲ್ಲಿ ನಡೆದ ಇಂಡಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಲು ಕರೆದ ಜನಾಭಿಪ್ರಾಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಸರಕಾರದಿಂದ ಬಂದ ವರದಿಯ ಬಗ್ಗೆ ಯಾರಿಗೂ ಸಂಪರ್ಕ ಮಾಡಿಲ್ಲ. ಹಿಂದೆ ಅಖಂಡ ಜಿಲ್ಲೆಯಲ್ಲಿ ೧೫ ತಾಲೂಕುಗಳಿದ್ದವು ಬಾಗಲಕೋಟ ಪ್ರತ್ಯೇಕ ಜಿಲ್ಲೆಯಾಗಿರುವುದರಿಂದ ಅಭಿವೃದ್ಧಿ ಕುಂಟಿತವಾಗಿತ್ತು ಜೆ.ಎಚ್.ಪಟೇಲ, ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ಹಲವು ತಾಲೂಕುಗಳನ್ನು ರಚನೆ ಮಾಡಿರುವುದರಿಂದ ಈ ಜಿಲ್ಲೆಗೆ ೧೩ ತಾಲೂಕುಗಳಾಗಿವೆ ಇವುಗಳಲ್ಲಿ ನೀರಾವರಿ, ರಾಷ್ಟ್ರೀಯ ಹೆದ್ದಾರಿಯಿಂದ ನಾಲ್ಕು ರಾಜ್ಯಗಳ ಸಂಪರ್ಕಕೊಂಡಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ತುಲನಾತ್ಮವಾಗಿ ನೋಡಿದಾಗ ಎಲ್ಲ ತಾಲೂಕುಗಳಿಗಿಂತ ಸಿಂದಗಿ ತಾಲೂಕು ಮುಂದಿದೆ. ಅದಕ್ಕೆ ಎಸ್ಪಿ, ಡಿವೈಎಸ್ಪಿ, ಆರ್ಟಿಓ ಆಫೀಸ್ಗಳನ್ನು ಮಂಜೂರು ಮಾಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಆ ಕಾರಣಕ್ಕೆ ಸಿಂದಗಿ ಜಿಲ್ಲೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.
ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿದರು.
ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು
ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿದರು.
ಈ ಸಂದರ್ಭದಲ್ಲಿ ಮಕ್ಕಳ ಸಾಹಿತಿ ಹ.ಮ.ಪೂಜಾರಿ, ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ, ವೈ.ಸಿ.ಮಯೂರ, ಡಾ.ದಸ್ತಗೀರ ಮುಲ್ಲಾ, ರಾಜಶೇಖರ ಕೂಚಬಾಳ, ಮಹಾಂತೇಶ ಪಟ್ಟಣಶೆಟ್ಟಿ, ಅಶೋಕ ಅಲ್ಲಾಪುರ, ಶಿಲ್ಪಾ ಕುದರಗೊಂಡ, ಸಂತೋಷ ಮಣಿಗೇರಿ, ಸಾಯಬಣ್ಣ ಪುರದಾಳ, ರಾಕೇಶ ಕಾಂಬಳೆ, ಅಶೋಕ ಸುಲ್ಪಿ ಸೇರಿದಂತೆ ಅನೇಕರು ಮಾತನಾಡಿ, ಸಿಂದಗಿ ತಾಲೂಕು ಜಿಲ್ಲೆಯಾಗುವ ಎಲ್ಲ ಲಕ್ಷಣಗಳಿವೆ. ಸಿಂದಗಿ ಜಿಲ್ಲೆಯನ್ನಾಗಿ ಮಾಡಲು ಬೆಂಗಳೂರು ಮಟ್ಟದವರೆಗೂ ಹೋರಾಟ ಮಾಡೋಣ. ಎಲ್ಲ ತಾಲೂಕುಗಳಿಗೂ ಹೋಗಿ ಅಭಿಪ್ರಾಯ ಸಂಗ್ರಹಣೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ತಾಪಂ ಇಓ ರಾಮು ಅಗ್ನಿ, ಕಸಾಪ ಅದ್ಯಕ್ಷ ಶಿವಾನಂದ ಬಡಾನೂರ, ಮಾಜಿ ಜಿಪಂ ಉಪಾದ್ಯಕ್ಷ ಸಿದ್ದರಾಮ ಪಾಟೀಲ ವೇದಿಕೆ ಮೇಲಿದ್ದರು.
Subscribe to Updates
Get the latest creative news from FooBar about art, design and business.
ಸರ್ವ ರೀತಿಯಿಂದ ಸಿಂದಗಿ ಜಿಲ್ಲೆಯಾಗಲು ಮುಂದು :ಶಾಸಕ ಮನಗೂಳಿ
Related Posts
Add A Comment

