ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಅವರು ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾದರು.ಆಯ್ಕೆ ಕುರಿತು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸಭೆಯಲ್ಲಿ ಪಿಂಜಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ.ಡಿ.ಮಾಗಿ, ಪ್ರ.ಕಾರ್ಯದರ್ಶಿಯಾಗಿ ಬಿ.ಎಂ.ಕಡಿ, ಉಪಾರ್ಧಯಕ್ಷರಾಗಿ ಎಚ್.ಬಿ.ಕೊಣ್ಣೂರ, ರಾಜ್ಯ ಪರಿಷತ್ ಸದಸ್ಯರಾಗಿ ಬಸಯ್ಯ ಹಿರೇಮಠ, ಖಜಾಂಚಿಯಾಗಿ ಎಸ್.ಎಸ್. ಸುಧಾಕರ, ಸಹ ಕಾರ್ಯದರ್ಶಿಯಾಗಿ ಆರ್.ಜಿ.ಗುಣಕಿ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಬಿ.ಜಿ.ಬಿರಾದಾರ ಆಯ್ಕೆಯಾಗಿದ್ದಾರೆ.ಈ ವೇಳೆ ಶಾಲೆಯ
ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಯಾವುದೆ ಧರ್ಮದ ಹಬ್ಬ ಹರಿದಿನಗಳಾಗಲಿ ಅದಕ್ಕೆ ಸಂಬಂದಪಟ್ಟಂತ ಕಾರ್ಯಕ್ರಮಗಳು ಮಾಡಬೇಕು ಅದರಿಂದ ಸಮಾಜ ಸುದಾರಣೆಯಾಗುವಂತ ಉತ್ತಮ ಸಂದೇಶ ನೀಡುವಂತಿರಬೇಕು ಎಂದು ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ ಹೇಳಿದರು.ಶನಿವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಹರಮ್ ಹಬ್ಬದ ನಿಮಿತ್ಯ ಹಮ್ಮಿಕೊಂಡಿದ್ದ ಪೂರ್ವಬಾವಿ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಬ್ಬ ಹರಿದಿನ, ಉತ್ಸವಗಳೆಂದರೆ ಕುಡಿದು ಅಸಭ್ಯ ವರ್ತನೆ ಮಾಡುವುದು ಹಬ್ಬಗಳಿಗೆ ಅಗೌರವಿಸಿದಂತೆ. ಯಾವುದೆ ಧರ್ಮದ ಹಬ್ಬಗಳಾಗಲಿ ಎಲ್ಲರು ಒಂದಾಗಿ ಶ್ರದ್ದಾ ಭಕ್ತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು.ಪಿಎಸ್ಐ
ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
ಬಿಜೆಪಿಗರಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿಗೆ ಅವಮಾನ | ವಿರೋಧಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ತುರ್ತು ಪರಿಸ್ಥಿತಿಯನ್ನು ಖಂಡಿಸುವ ನೆಪದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಅವಮಾನಿಸುತ್ತಿರುವುದನ್ನು ವಿರೋಧಿಸಿ ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ ತಕ್ಷಣ, ಅವರನ್ನು ಸ್ಥಳದಿಂದ ಚದುರಿಸಲಾಯಿತು ಮತ್ತು ಪೊಲೀಸ್ ವ್ಯಾನ್ಗಳಲ್ಲಿ ಕರೆದೊಯ್ಯಲಾಯಿತು.ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು
Subscribe to Updates
Get the latest creative news from FooBar about art, design and business.