ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಉದಯರಶ್ಮಿ ದಿನಪತ್ರಿಕೆ ಜಮಖಂಡಿ :ತಾಲೂಕಿನ ಕೃಷ್ಣಾತಟದ ಪುಣ್ಯಕ್ಷೇತ್ರ ಚಿಕ್ಕಪಡಸಲಗಿ ಗ್ರಾಮದ ಪುನರ್ವಸತಿ ಕೇಂದ್ರದ ಚಿಕ್ಕಲಕಿ ಕ್ರಾಸ್ ಹತ್ತಿರವಿರುವ ಶ್ರೀ ಸಿದ್ಧಲಿಂಗೇಶ್ವರ ಮಹಾರಾಜರ ಕಮರಿಮಠದಲ್ಲಿ ವಿಶ್ವಶಾಂತಿಗಾಗಿ 14ನೇಯ ವೇದಾಂತ ಪರಿಷತ್ ಕಾರ್ಯಕ್ರಮವು ಇಂಚಲದ ಪರಮ ಪೂಜ್ಯ ಶ್ರೀ ಸದ್ಗುರು ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಮತ್ತು ಮಹಾಲಿಂಗಪೂರದ ಪರಮ ಪೂಜ್ಯ ಶ್ರೀ ಸಹಜಾನಂದ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಮಾತೋಶ್ರೀ ಅಕ್ಕಮಹಾದೇವಿ ತಾಯಿಯವರ ಸದೀಚ್ಛೆಯ ಮೇರೆಗೆ ಇದೆ ಶುಕ್ರವಾರ ದಿನಾಂಕ ಫೆ.6 ಮತ್ತು 7 ರಂದು ಎರಡು ದಿನಗಳ ಕಾಲ ಜರುಗಲಿದೆ
ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್ಡಿಎಂಸಿ ರಚನೆ

ಉದಯರಶ್ಮಿ ದಿನಪತ್ರಿಕೆಜಮಖಂಡಿ : ತಾಲೂಕಿನ ಅಡಿಹುಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೂತನವಾಗಿ ಎಸ್ಡಿಎಂಸಿ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಸಂಗಪ್ಪ ಕೋಟ್ಯಾಳ, ಉಪಾಧ್ಯಕ್ಷರಾಗಿ ಗೀತಾ ಶಿಂಧೆ, ಸದಸ್ಯರಾಗಿ ಭೀಮಪ್ಪ ಚೌರಿ, ಲಕ್ಕಪ್ಪ ಬೆಳಗಲಿ, ಹಾಸಿಮ್ ಜಮಖಂಡಿ, ಸರ್ದಾರ್ ಯಡವೆ, ಶಿವಾನಂದ ವಾಲಿಕಾರ, ಶಾರದಾ ಆಕಳೆ, ಮೀನಾಕ್ಷಿ ಭಜಂತ್ರಿ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯ ಗುರುಗಳಾದ ವಿಜಯಕುಮಾರ ಲಿಗಾಡಿ, ತಾಲೂಕ ಪಂಚಾಯತ ಸದಸ್ಯ, ಧರೇಪ್ಪ ಗುಗ್ಗರಿ, ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಭರತ್ ಗುಗ್ಗರಿ, ಉಪಾಧ್ಯಕ್ಷ ಅಬ್ದುಲ್ ಜಮಖಂಡಿ, ಬಿ ಎಸ್
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ತಾಲ್ಲೂಕಾ ಆಡಳಿತದ ಕಾರ್ಯವೈಖರಿ, ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ಕೊಲ್ಹಾರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು, ಆಧಾರ ನೋಂದಣಿ, ಕಂದಾಯ ಗ್ರಾಮ ಮಾಹಿತಿ, ಭೂಮಿ ಪ್ರಗತಿ, ಈ-ಪೌತಿ ಖಾತೆ ಪ್ರಗತಿ, ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಿದರು. ಸರಕಾರದ ಮಹತ್ವದ ಭೂ-ಸುರಕ್ಷಾ ಯೋಜನೆಯಡಿ ಭೂ-ದಾಖಲೆಗಳು ಸಾರ್ವಜನಿಕರಿಗೆ ದಾಖಲೆಗಳನ್ನು ಪಡೆದುಕೊಳ್ಳುವ ಬಗ್ಗೆ
Subscribe to Updates
Get the latest creative news from FooBar about art, design and business.



